National

ROAD ACCIDENT; ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ; 6 ಮಂದಿ ಗಂಭೀರ

ಶ್ರೀಕಾಕುಳಂ (ಆಂಧ್ರಪ್ರದೇಶ): ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ರಾಜಂ ಮಂಡಲದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒಡಿಶಾದಿಂದ ಕೇರಳಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌ವೊಂದು ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 30 ಮಂದಿಗೆ ತೀವ್ರ ಗಾಯಗಳಾಗಿದೆ. ಆರು ಮಂದಿ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳು ಶ್ರೀಕಾಕುಳಂನ ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜಂ ಮಂಡಲ ಬಳಿ ಫ್ಲೈ ಓವರ್‌ ಮೇಲೆ ಅತಿವೇಗವಾಗಿ ಬಂದ ಖಾಸಗಿ ಬಸ್‌ ಲಾರಿಯೊಂದನ್ನು ಹಿಂದಿಕ್ಕಲು ಹೋಗಿದೆ. ಈ ವೇಳೆ ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.  ಬಸ್‌ನಲ್ಲಿ ಐವತ್ತಕ್ಕೂ ಹೆಚ್ಚು ಮಂದಿ ಪ್ರಯಾಣ ಮಾಡುತ್ತಿದ್ದರು. ಎಲ್ಲರೂ ಕೂಲಿ ಕಾರ್ಮಿಕರಾಗಿದ್ದು, ಒಡಿಶಾದಿಂದ ಕೇರಳಕ್ಕೆ ಹೋಗುತ್ತಿದ್ದರು. ಸರ್ಕಾರದ ಸೇತುವೆ, ರಸ್ತೆ, ಚರಂಡಿ ಕಾಮಗಾರಿಗಳ ಕೆಲಸಕ್ಕೆಂದು ಅವರು ಕೇರಳಕ್ಕೆ ಹೋಗುತ್ತಿದ್ದರೆಂದು ತಿಳಿದುಬಂದಿದೆ.

 

Share Post