CrimeNational

ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತ; ಆರು ಮಂದಿ ದುರ್ಮರಣ

ಚೆನ್ನೈ; ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಬೆಳಗಿನ ಜಾವ 4 ಗಂಟೆಗೆ ಸರ್ಕಾರಿ ಸಾರಿಗೆ ಬಸ್ ಹಾಗೂ ಖಾಸಗಿ ಬಸ್ ಪರಸ್ಪರ ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ಮಹಿಳೆ ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಎರಡು ವಾಹನಗಳ ಚಾಲಕರೂ ಸೇರಿದ್ದಾರೆ. ಇನ್ನೂ 60 ಮಂದಿ ಗಾಯಗೊಂಡಿದ್ದಾರೆ. ಎರಡೂ ವಾಹನಗಳ ಮುಂಭಾಗ ಗೀಚಿದೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಅಲ್ಲಿಗೆ ಆಗಮಿಸಿದ್ದು, ಗಾಯಾಳುಗಳನ್ನು ವನ್ಯಂಬಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share Post