National

ಅಗ್ನಿಪಥ್ ಪ್ರತಿಭಟನೆ; ಸಿಕಂದರಾಬಾದ್ ನಿಲ್ದಾಣದಲ್ಲಿ ಗುಂಡಿನ ದಾಳಿ

ಹೈದರಾಬಾದ್‌; ಸಿಕಂದರಾಬಾದ್ ರೈಲು ನಿಲ್ದಾಣವು ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಅಗ್ನಿಪಥ್ ಯೋಜನೆಯ ವಿರುದ್ಧ ಪ್ರತಿಭಟನಾಕಾರರು ನಿಲ್ದಾಣದಲ್ಲಿ ವಿಧ್ವಂಸಕ ಕೃತ್ಯಗಳನ್ನು ಸೃಷ್ಟಿಸುತ್ತಿದ್ದಾರೆ.  ನೂರಾರು ಪ್ರತಿಭಟನಾಕಾರರು ನಿಲ್ದಾಣದೊಳಗೆ ಧಾವಿಸಿದ್ದು, ಕೆಲವು ರೈಲುಗಳಿಗೆ ಬೆಂಕಿ ಹಚ್ಚಲಾಗಿದೆ. ರೈಲ್ವೆ ಆಸ್ತಿಪಾಸ್ತಿಗಳನ್ನು ಧ್ವಂಸ ಮಾಡಿದ್ದಾರೆ. 

ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ಅಶ್ರುವಾಯು ಪ್ರಯೋಗ ಮತ್ತು ರಬ್ಬರ್ ಗುಂಡುಗಳನ್ನು ಹಾರಿಸಿ ಪ್ರತಿಭಟನಾಕಾರರನ್ನು ಚದುರಿಸಲು ಪ್ರಯತ್ನಿಸಲಾಗುತ್ತಿದೆ.ಪೊಲೀಸರು ೧೫ ಸುತ್ತು ಗುಂಡು ಹಾರಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.

Share Post