National

ಶಾಂತಿಯುತ ಪ್ರತಿಭಟನೆಗೆ ಸೋನಿಯಾ ಗಾಂಧಿ ಮನವಿ

ನವದೆಹಲಿ; ಕೇಂದ್ರ ಸರ್ಕಾರದ ಅಗ್ನಿಪಥ್‌ ಯೋಜನೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರು ಹಿಂಸಾಚಾರ ಮಾಡಬೇಡಿ. ಪ್ರತಿಭಟನೆ ಶಾಂತಿಯುತವಾಗಿ ಪ್ರತಿಭಟನೆ ಮಾಡುವಂತೆ ಕಾಂಗ್ರೆಸ್‌ ನಾಯಕಿ ಸೋನಿಯಾಗಾಂಧಿ ಮನವಿ ಮಾಡಿದ್ದಾರೆ. ಅವರು ಗಂಗಾರಾಮ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಯಿಂದಲೇ ಕರೆಕೊಟ್ಟಿದ್ದಾರೆ.

ಹೊಸ ಸೇನಾ ನೇಮಕಾತಿ ಯೋಜನೆಯಾದ ಅಗ್ನಿಪಥ್ ವಿರುದ್ಧದ ಪ್ರತಿಭಟನೆಗಳು ಇದೀಗ ಎಂಟು ರಾಜ್ಯಗಳಿಗೆ ಹರಡಿದೆ. ವಿವಾದಾತ್ಮಕ ಯೋಜನೆಯನ್ನು ಹಿಂತೆಗೆದುಕೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ಕಾಂಗ್ರೆಸ್‌ ಪಕ್ಷವು ಪ್ರತಿಭಟನಾಕಾರರೊಂದಿಗೆ ನಿಲ್ಲುತ್ತದೆ  ಎಂದು ಮಿಲಿಟರಿ ಉದ್ಯೋಗಾಕಾಂಕ್ಷಿಗಳಿಗೆ ಸೋನಿಯಾ ಗಾಂಧಿ ಭರವಸೆ ನೀಡಿದ್ದಾರೆ.

ಸೇನಾ ನೇಮಕಾತಿ ಯೋಜನೆಯು ದಿಕ್ಕುಗಳಿಲ್ಲದ ಮತ್ತು ಸೇನಾ ಉದ್ಯೋಗ ಆಕಾಂಕ್ಷಿಗಳ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಳ್ಳದೆ ಘೋಷಿಸಲಾಗಿದೆ ಎಂದು ಕೇಂದ್ರದ ವಿರುದ್ಧ ಸೋನಿಯಾ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

Share Post