National

ಹವಾಮಾನ ವೈಪರೀತ್ಯ ಹಿನ್ನೆಲೆ; ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಶ್ರೀನಗರ; ಮಳೆ ಹಾಗೂ ಹವಾಮಾನ ಪ್ರತಿಕೂಲದಿಂದಾಗಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸದ್ಯಕ್ಕೆ  ಪಹಲ್ಗಾಮ್‌ನ ನುನ್ವಾನ್ ಶಿಬಿರದಿಂದ ಪವಿತ್ರ ಗುಹೆಯತ್ತ ತೆರಳಲು ಯಾತ್ರಾರ್ಥಿಗಳಿಗೆ ಅನುಮತಿ ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮರನಾಥ ಯಾತ್ರಾರ್ಥಿಗಳ ಮೊದಲ ಬ್ಯಾಚ್ ಕಳೆದ ಗುರುವಾರ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಮೂಲ ಶಿಬಿರವನ್ನು ತಲುಪಿದೆ. ಆದ್ರೆ ಹವಾಮಾಲ ವೈಪರಿತ್ಯದಿಂದಾಗಿ ಅಲ್ಲಿಂದ ಮುಂದೆ ಹೋಗಲು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಎರಡು ವರ್ಷದಿಂದ ಕೊರೊನಾದಿಂದಾಗಿ ಅಮರನಾಥನ ದರ್ಶನವಾಗಿರಲಿಲ್ಲ. ಈ ಬಾರಿ ಅಮರನಾಥ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಹೀಗಾಗಿ, ಸಾವಿರಾರು ಭಕ್ತರು ಅಮರನಾಥ ದರ್ಶನಕ್ಕೆ ತೆರಳಿದ್ದರು. ಆದ್ರೆ, ಹವಾಮಾನ ವೈಪರೀತ್ಯ ಭಕ್ತರಿಗೆ ನಿರಾಸೆಯನ್ನುಂಟುಮಾಡುತ್ತಿದೆ.

Share Post