National

ಬಧು ಶೇಕ್‌ ಕೊಲೆ ಹಿನ್ನೆಲೆ ಹಿಂಸಾಚಾರ; 22 ಮಂದಿಯನ್ನು ಬಂಧಿಸಿದ ಪೊಲೀಸರು

ಕೋಲ್ಕತ್ತ: ಟಿಎಂಸಿ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಬಧು ಶೇಕ್‌ ಎಂಬ ಟಿಎಂಸಿ ಮುಖಂಡನನ್ನು ಕೊಲೆ ಮಾಡಲಾಗಿತ್ತು. ಇದಾದ ನಂತರ ಬಧು ಶೇಕ್‌ ಬೆಂಬಲಿಗರು ಹಲವು ಮನೆಗಳಿಗೆ ಬೆಂಕಿ ಹಚ್ಚಿದ್ದು ಎಂಟು ಮಂದಿ ಸಜೀವ ದಹನವಾಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 22 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರ ಪೈಕಿ ಭದು ಶೇಕ್‌ ಅವರ ಮಕ್ಕಳು ಸೇರಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸರು ಇದುವರೆಗೆ ಬಂಧಿತ ಆರೋಪಿಗಳ ಹೆಸರನ್ನು ಬಹಿರಂಗಪಡಿಸಿಲ್ಲ.

8 ಮಂದಿ ಜೀವಂತವಾಗಿ ಸುಟ್ಟುಹೋದ ಘಟನೆಗೆ ಸಂಬಂಧಿಸಿ ಇದುವರೆಗೆ ಕನಿಷ್ಠ 22 ಮಂದಿಯನ್ನು ಬಂಧಿಸಲಾಗಿದೆ ಎಂದು ಬುಧವಾರ ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.
ಸೋಮವಾರ ಕೊಲೆಯಾದ ಬರ್ಶಾಲ್‌ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭದು ಶೇಕ್‌ ಎಂಬುವವರ ಕುಟುಂಬ ಸದಸ್ಯರು ಪ್ರತೀಕಾರದ ಭಾಗವಾಗಿ ದಾಳಿ ನಡೆಸಿದ್ದಾರೆ. ರಾಮ್‌ಪುರಹಾಟ್‌ ನಗರದ ಹೊರವಲಯದಲ್ಲಿರುವ ಬೊಗ್‌ತುಯಿ ಗ್ರಾಮದ 10 ಮನೆಗಳ ಮೇಲೆ ಪೆಟ್ರೋಲ್‌ ಬಾಂಬ್‌ ಎಸೆದಿದ್ದಾರೆ ಎಂದು ಆರೋಪ ಕೇಳಿಬಂದಿದೆ.

Share Post