NationalPolitics

ಬಿಜೆಪಿ-ಜೆಡಿಎಸ್‌ ಮೈತ್ರಿ ವಿಚಾರ; ಇಂದು ಶಾ, ನಡ್ಡಾ ಭೇಟಿಯಾಗಲಿರುವ ಹೆಚ್ಡಿಕೆ

ನವದೆಹಲಿ; ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಹೊಂದಾಣಿಕೆ ಮಾಡಿಕೊಳ್ಳೋದು ಗ್ಯಾರೆಂಟಿಯಾಗಿದೆ. ಈಗಾಗಲೇ ಎರಡೂ ಪಕ್ಷಗಳ ನಾಯಕರು ಇದಕ್ಕೆ ಗ್ರೀನ್‌ ಸಿಗ್ನಲ್‌ ತೋರಿಸಿದ್ದಾರೆ. ಸೀಟು ಹಂಚಿಕೆಯಷ್ಟೇ ಬಾಕಿ ಇರೋದು. ಜೆಡಿಎಸ್‌ ನಾಯಕರು ಐದು ಕ್ಷೇತ್ರ ಬಿಟ್ಟುಕೊಡುವಂತೆ ಕೇಳುತ್ತಿದ್ದಾರೆ. ಬಿಜೆಪಿಯವರು ನಾಲ್ಕು ಕ್ಷೇತ್ರ ಬಿಟ್ಟುಕೊಡೋಕೆ ರೆಡಿ ಇದ್ದಾರೆ ಎನ್ನಲಾಗಿದೆ. ಈ ಸಂಬಂಧ ಮಾತುಕತೆ ನಡೆಸಲು ಮಾಜಿ ಸಿಎಂ ಕುಮಾರಸ್ವಾಮಿ ದೆಹಲಿಗೆ ತೆರಳಿದ್ದಾರೆ.

ಇಂದು ಸಂಜೆ ಮಾಜಿ ಸಿಎಂ ಕುಮಾರಸ್ವಾಮಿಯವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ಮೈತ್ರಿ ಸಂಬಂಧ ಮಾತುಕತೆ ನಡೆಸಲಿದ್ದಾರೆ.

 

Share Post