CrimeNational

ಗುಂಡಿಕ್ಕಿ‌ ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಲಖನೌ; ಉತ್ತರ ಪ್ರದೇಶದಲ್ಲಿ ಬಿಜೆಪಿ ಮುಖಂಡನ‌ ಹತ್ಯೆಯಾಗಿದೆ. ಸಂಭಾಲ್ ನ ಬಿಜೆಪಿ ಮುಖಂಡ ಅನುಜ್ ಚೌಧರಿ ಹತ್ಯೆಯಾದವರು. ನಿನ್ನೆ ಸಂಜೆ ಅವರಿಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಅನುಜ್ ಅವರು ನಿನ್ನೆ ಸಂಜೆ ಅಪಾರ್ಟ್ ಮೆಂಟ್ ಬಳಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಮೂವರು ದುಷ್ಕರ್ಮಿಗಳು ಬಂದಿದ್ದಾರೆ. ಏಕಾಏಕಿ ಹಲವು ಸುತ್ತು ಗುಂಡು ಹಾರಿಸಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಮೊರಾದಾಬಾದ್ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದ್ರೆ ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ. ನಾಲ್ವರ ವಿರುದ್ದ ಕೇಸ್ ದಾಖಲಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

Share Post