CrimeNational

ಕೇರಳದಲ್ಲಿ ಆರ್‌ಎಸ್‌ಎಸ್‌ ಕಚೇರಿ ಮೇಲೆ ಬಾಂಬ್‌ ದಾಳಿ

ಕಣ್ಣೂರು; ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನ ಆರ್‌ಎಸ್‍ಎಸ್ ಕಚೇರಿ ಮೇಲೆ  ದುಷ್ಕರ್ಮಿಗಳು ಬಾಂಬ್ ದಾಳಿ ನಡೆಸಿದ್ದಾರೆ. ಇಂದು ಮುಂಜಾನೆ ಈ ಕೃತ್ಯ ಎಸಗಲಾಗಿದ್ದು, ಆರ್‌ಎಸ್‌ಎಸ್‌ ಕಟ್ಟಡದ ಕಿಟಕಿ ಗಾಜುಗಳು ಒಡೆದಿವೆ. ಸ್ಥಳೀಯ ಪೊಲೀಸ್ ಠಾಣೆ ಸಮೀಪದಲ್ಲಿಯೇ ಈ ದಾಳಿ ನಡೆದಿದ್ದು, ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.

     ಈ  ದಾಳಿಯ ಹಿಂದೆ ಸಿಪಿಎಂ ಕೈವಾಡವಿದೆ ಎಂದು ಆರ್‌ಎಸ್‌ಎಸ್ ಮುಖಂಡರು ಆರೋಪ ಮಾಡಿದ್ದಾರೆ. ಜುಲೈ 11 ರಂದು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರಿಂದ ಹತ್ಯೆಗೀಡಾದ ಪಯ್ಯನ್ನೂರು ರಾಮಂತಳ್ಳಿಯ ಸಿಪಿಎಂ-ಡಿವೈಎಫ್‌ಐ ಕಾರ್ಯಕರ್ತ ಧನರಾಜ್ ಅವರ ಪುಣ್ಯತಿಥಿಯ ನಂತರ ಈ ದಾಳಿ ನಡೆದಿದೆ. ಬಾಂಬ್ ದಾಳಿ ನಡೆಸಿದವರು ಯಾರು? ಯಾವ ಕಾರಣಕ್ಕಾಗಿ ಕೃತ್ಯ ಎಸಗಲಾಗಿದೆ? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share Post