National

ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ; ಕೆಲಕಾಲ ಆತಂಕ

ದೇವನಹಳ್ಳಿ; ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬಾಂಬ್ ಬೆದರಿಕೆ ಕರೆಯೊಂದು ಬೆಳಗ್ಗೆ ಬಂದಿದ್ದು, ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು. ಆದ್ರೆ ಅದು ಹುಸಿ ಬೆದರಿಕೆ ಕರೆ ಎಂದು ಹೇಳಲಾಗುತ್ತಿದೆ.

     ಇಂದು ಮುಂಜಾನೆ 3:30ರ ಸಮಯದಲ್ಲಿ ವಿಮಾನ ನಿಲ್ದಾಣದ ಪೊಲೀಸ್ ಕಂಟ್ರೋಲ್ ರೂಮ್​ಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದ. ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಆತ ಹೇಳಿದ್ದ. ಈ ಹಿನ್ನೆಲೆಯಲ್ಲಿ ತಕ್ಷಣ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಮತ್ತು ಸಿಐಎಫ್​ಸಿ ಪೊಲೀಸರನ್ನು ಕರೆಸಿ ಪರಿಶೀಲನೆ ನಡೆಸಲಾಯಿತು.

Share Post