National

ಚಾಲಕನ ನಿರ್ಲಕ್ಷ್ಯಕ್ಕೆ ಮಗು ಸೇರಿ ಮೂವರು ಬಲಿ

ಮಧ್ಯಪ್ರದೇಶ: ಚಾಲಕನ ನಿರ್ಲಕ್ಷ್ಯಕ್ಕೆ ಬಸ್‌ ನದಿಗೆ ಉರುಳಿ ಬಿದ್ದು ಒಂದು ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯ ಚಾಂದ್‌ಪುರ ಗ್ರಾಮದ ಬಳಿ ನಡೆದಿದೆ. ಕೈಲಾಶ್​ ಮೇದಾ (48), ಮೀರಾಬಾಯಿ (46), ಒಂದು ವರ್ಷದ ಮಗು ಮೃತ ದುರ್ದೈವಿಗಳಾಗಿದ್ದಾರೆ.

ಘಟನೆಯಲ್ಲಿ 28ಮಂದಿಗೆ ಗಂಭೀರ ಗಾಯಗಳಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಇಂದು ಬೆಳಗಿನ ಜಾವ ಆರು ಗಂಟೆಗೆ ಅಲಿರಾಜ್‌ಪುರದಿಂದ ಗುಜರಾತ್ಉ‌ನ ದೇಪುರಕ್ಕೆ ಹೋಗುತ್ತಿದ್ದ ಮಾರ್ಗ ಮಧ್ಯದಲ್ಲಿ ದುರ್ಘಟನೆ ನಡೆದಿದೆ. ಬಸ್‌ ಚಾಲಕ ನಿದ್ದೆ ಮಂಪರಿನಲ್ಲಿದ್ದುದ್ದೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ನಿದ್ದೆಯ ಪರಿಣಾಮ ಬಸ್‌ ನಿಯಂತ್ರನ ತಪ್ಪಿ ಮೆಲ್ಖೋದ್ರಾ ನದಿಗೆ ಉರುಳಿ ಬಿದ್ದಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಮನೋಜ್‌ ಪುಷ್ಪ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸ್‌ ಅಧಿಕಾರಿ ಮನೋಜ್‌ ಕುಮಾರ್‌ ತಿಳಿಸಿದ್ದಾರೆ.

Share Post