BengaluruNationalPolitics

ಸಂಸತ್‌ ಸ್ಥಾನದಿಂದ ತೆಗೆಯಬಹುದು, ಜನರ ಹೃದಯದಿಂದಲ್ಲ; ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು; ರಾಹುಲ್‌ ಗಾಂಧಿಯವರನ್ನು ಸಂಸತ್‌ ಸ್ಥಾನದಿಂದ ಅನರ್ಹಗೊಳಿಸಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ರಾಹುಲ್‌ ಅವರನ್ನು ಸಂಸತ್‌ ಸ್ಥಾನದಿಂದ ತೆಗೆದು ಹಾಕಬಹುದು. ಜನರ ಹೃದಯದಿಂದ ತೆಗೆಯಲು ಆಗಲ್ಲ ಎಂದು ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್‌ ಅವರ ಟ್ವೀಟ್‌ ಈ ಕೆಳಗಿನಂತಿದೆ; 

ನೀವು ಶ್ರೀ @RahulGandhi ಅವರನ್ನು ಸಂಸತ್ ಸ್ಥಾನದಿಂದ ತೆಗೆದುಹಾಕಬಹುದು ಆದರೆ ಕೋಟ್ಯಂತರ ಭಾರತೀಯರು ಹೃದಯದಲ್ಲಿ ನೀಡಿರುವ ಸ್ಥಾನದಿಂದ ತೆಗೆದುಹಾಕುವುದು ಅಸಾಧ್ಯ. ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ಧೋರಣೆಗೆ ನನ್ನ ಧಿಕ್ಕಾರ.

Share Post