National

ರಾಜ್ಯದಲ್ಲಿ ಮಾರಾಟ ಮಾಡುವಷ್ಟು ವಿದ್ಯುತ್‌ ಇದೆ; ಇಂಧನ ಸಚಿವ ಸುನಿಲ್‌ಕುಮಾರ್‌

ಮಂಗಳೂರು: ಹೊರರಾಜ್ಯಗಳಿಗೆ ವಿದ್ಯುತ್ ಮಾರಾಟ ಮಾಡುವಷ್ಟು ಶಕ್ತಿ ನಮ್ಮಲ್ಲಿದೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಸ್ಪಷ್ಟಪಡಿಸಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಲ್ಲಿದ್ದಲಿನ ಕೊರತೆ ಕಾರಣಕ್ಕೆ ವಿದ್ಯುತ್ ಉತ್ಪಾದನೆ ಕಡಿತಗೊಳಿಸಿಲ್ಲ. ಉಳಿದ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ವಿದ್ಯುತ್ ನಿರ್ವಹಣೆಯನ್ನು ಯಶಸ್ವಿಯಾಗಿ ಮಾಡಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಬಂದೇ ಇಲ್ಲ. ಬೇಸಿಗೆ ಪೂರ್ವ ತಯಾರಿಯನ್ನು ನಾಲ್ಕು ತಿಂಗಳುಗಳ ಹಿಂದೆಯೇ ಮಾಡಿಕೊಂಡಿದ್ದೇವೆ. ಪ್ರತಿನಿತ್ಯ ರಾಜ್ಯಕ್ಕೆ 13ರಿಂದ 15 ರೇಕ್ ಕಲ್ಲಿದ್ದಲು ಸರಬರಾಜಾಗುತ್ತಿದೆ. ವಿರೋಧ ಪಕ್ಷಗಳ ಊಹಾಪೋಹ ಸತ್ಯಕ್ಕೆ ದೂರವಾದ ಸಂಗತಿ. ರಾಜ್ಯದಲ್ಲಿ 14,800 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದ್ದಾಗಲೇ ನಾವು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ್ದೇವೆ. ಕೇಂದ್ರ ಸರ್ಕಾರದ ಜತೆ ನಿರಂತರ ಸಂಪರ್ಕದಲ್ಲಿದ್ದು, ಕಲ್ಲಿದ್ದಲು ಕೊರತೆ ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು.

Share Post