National

ಬಿಜೆಪಿಗೆ ಠಕ್ಕರ್‌ ಕೊಡಲು ಕಾಂಗ್ರೆಸ್‌ ಸರ್ಕಾರದ ಮೆಗಾಪ್ಲ್ಯಾನ್‌; ರಿಯಾಯಿತಿ ದರದಲ್ಲಿ ಅಯೋಧ್ಯೆ ಯಾತ್ರೆ

ಬೆಂಗಳೂರು; ರಾಜ್ಯ ಬಿಜೆಪಿ ನಾಯಕರು, ರಾಮ ಭಕ್ತರನ್ನು ವಿಶೇಷ ರೈಲುಗಳ ಮೂಲಕ ಅಯೋಧ್ಯೆಗೆ ಕರೆದೊಯ್ಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಇದೇ ವೇಳೆ ರಾಜ್ಯ ಸರ್ಕಾರ ಕೂಡಾ ಬಿಜೆಪಿಗೆ ಠಕ್ಕರ್‌ ಕೊಡಲು ಮುಂದಾಗಿದೆ. ಸರ್ಕಾರದಿಂದಲೇ ಅಯೋಧ್ಯೆಗೆ ಹೋಗುವವರಿಗೆ ರಿಯಾಯಿತಿ ದರದಲ್ಲಿ ಪ್ರಯಾಣ ವ್ಯವಸ್ಥೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ.

ಈಗಾಗಲೇ ರಾಜ್ಯ ಸರ್ಕಾರ ಕಾಶಿಗೆ ತೆರಳುವವರಿಗೆ ರಿಯಾಯಿತಿ ನೀಡುತ್ತಿದೆ. ಗೌರವ ಕಾಶಿ ರೈಲು ಯಾತ್ರೆ ಇದಾಗಿದೆ. ಇದರ ಜೊತೆಗೆ ಅಯೋಧ್ಯೆಗೆ ತೆರಳುವವರಿಗೂ ರಿಯಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾಧ್ಯಮವೊಂದರ ಜೊತೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ.

ಜನರ ಬೇಡಿಕೆಗೆ ಅನುಗುಣವಾಗಿ ನಾವು ಕಡಿಮೆ ದರದಲ್ಲಿ ಯಾತ್ರೆ ವ್ಯವಸ್ಥೆ ಮಾಡುತ್ತೇವೆ. ಅಯೋಧ್ಯೆ ಯಾತ್ರೆ ಕೂಡಾ ಇದರಲ್ಲಿ ಸೇರಲಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈಗ ಚಳಿ ಹೆಚ್ಚಿದೆ, ಹೊತೆಗೆ ಅಯೋಧ್ಯೆ ಇನ್ನೂ ಮೂಲ ಸೌಕರ್ಯಗಳ ಅಭಿವೃದ್ಧಿಯಾಗಬೇಕಿದೆ. ಹೀಗಾಗಿ ಮಾರ್ಚ್‌ನಿಂದ ಈ ಯಾತ್ರೆ ಭಾಗ್ಯ ಸಿಗಬಹುದು ಎಂದು ಹೇಳಲಾಗುತ್ತಿದೆ.

 

Share Post