NationalPolitics

ಪುದುಚೇರಿಯಲ್ಲಿ ದಿನೇಶ್‌ ಗುಂಡೂರಾವ್‌ ಕಾರಿನ ಮೇಲೆ ದಾಳಿ

ಪುದುಚೇರಿ; ರಾಜ್ಯ ಕಾಂಗ್ರೆಸ್​ ಹಿರಿಯ ನಾಯಕ ದಿನೇಶ್​ ಗುಂಡೂರಾವ್​ ಅವರ ಕಾರಿನ ಮೇಲೆ ದಾಳಿ ನಡೆದಿದೆ. ಕಾಂಗ್ರೆಸ್‌ ಪಕ್ಷ ಕಾರ್ಯಕರ್ತರೇ ಪುದುಚೇರಿಯಲ್ಲಿ ದಾಳಿ ಮಾಡಿದ್ದಾರೆ. ಇಲ್ಲಿ ನಡೆದ ಕಾರ್ಯಕಾರಿಣಿ ಸಭೆ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮುತ್ತಿಗೆ ಹಾಕಿದ ಕಾರ್ಯಕರ್ತರು ಗುಂಡೂರಾವ್​ ಅವರನ್ನು ತಳ್ಳಾಡಿದ ಪ್ರಸಂಗ ನಡೆದಿದೆ.

ಪುದುಚೇರಿಯ ವಯ್ಯಲ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಕಾರ್ಯಕಾರಿಣಿ ಸಭೆ ನಡೆಯಿತು. ಪುದುಚೇರಿ ಮಾಜಿ ಮುಖ್ಯಮಂತ್ರಿ ನಾರಾಯಣಸ್ವಾಮಿ, ರಾಜ್ಯಾಧ್ಯಕ್ಷ ಸುಬ್ರಮಣಿಯನ್ ಸೇರಿದಂತೆ ಪಕ್ಷದ ಹಲವು ಪದಾಧಿಕಾರಿಗಳು ಭಾಗವಹಿಸಿದ್ದರು. ಈ ವೇಳೆ ಕಾಂಗ್ರೆಸ್‌ನ ಗುಂಪೊಂದು ರಾಜ್ಯಾಧ್ಯಕ್ಷರ ಅಧಿಕಾರವಧಿ ಕುರಿತಾಗಿ ಗಲಾಟೆ ಶುರು ಮಾಡಿದೆ. ರಾಜ್ಯಾಧ್ಯಕ್ಷರನ್ನು ಬದಲಾಯಿಸಬೇಕೆಂದು ಪಟ್ಟು ಹಿಡಿದಿದೆ. ಇದರಿಂದಾಗಿ ಸಭೆಯಲ್ಲಿ ಗದ್ದಲ ಉಂಟಾದ್ದರಿಂದ ಮಾಜಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಸಭೆಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ದಿನೇಶ್​ ಗುಂಡೂರಾವ್ ಅವರು ಸಭೆಯಿಂದ ಹೊರಬಂದಾಗ ಮುತ್ತಿಗೆ ಹಾಕಿದ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ದಿನೇಶ್​ರನ್ನು ತಳ್ಳಾಡಿದ್ದಾರೆ.

ರಾಜ್ಯಾಧ್ಯಕ್ಷರ ಅವಧಿ ಮುಗಿದಿದೆ. ಅವರನ್ನು ಬದಲಿಸಬೇಕು ಎಂದು ಘೋಷಣೆ ಕೂಗುತ್ತಾ ಅವರ ಕಾರಿನ ಮೇಲೆ ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Share Post