National

ಕೊವಿಡ್‌ ಹಿನ್ನೆಲೆ: ಗಣರಾಜ್ಯೋತ್ಸವ ಪೆರೇಡ್‌ 5-8 ಸಾವಿರ ಮಂದಿಗಷ್ಟೇ ಅವಕಾಶ..!

ನವದೆಹಲಿ: ದೇಶದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸುತ್ತಿವೆ. ಹೀಗಾಗಿ ಸರ್ಕಾರಿ ಕಾರ್ಯಕ್ರಮಗಳಲ್ಲೂ ಕೊವಿಡ್‌ ನಿಯಮಗಳನ್ನು ಪಾಲಿಸಲೇಬೇಕಾಗುತ್ತದೆ. ಇದರಿಂದಾಗಿ ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ಗೆ ಜನರ ಮಿತಿ ನಗದಿ ಮಾಡಲಾಗಿದೆ. ಕೇವಲ ಐದರಿಂದ ಎಂಟು ಸಾವಿರ ಮಂದಿಗಷ್ಟೇ ಅವಕಾಶ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ದೆಹಲಿಯಲ್ಲಿ ನಡೆಯುವ ಪಥಸಂಚಲನ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ೨೫ ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುತ್ತಿದ್ದರು. ಆದ್ರೆ ಈ ಬಾರಿ ಕೇವಲ ೫-೮ ಸಾವಿರ ಮಂದಿಗಷ್ಟೇ ಅವಕಾಶ ನೀಡಲಾಗಿದೆ. ಕೊವಿಡ್‌ ಹರಡುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಜನರು ಪಥಸಂಚಲನವನ್ನು ಟಿವಿ ವಾಹಿನಿಗಳನ್ನು ನೇರ ವೀಕ್ಷಣೆ ಮಾಡಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Share Post