NationalPolitics

ಶಿವಸೇನೆ ಶಾಸಕರ ಬಂಡಾಯ; 16 ಶಾಸಕರಿಗೆ ಅನರ್ಹತೆಯ ನೋಟಿಸ್‌ ಜಾರಿ

ಮುಂಬೈ; ಮಹಾರಾಷ್ಟ್ರ ರಾಜಕೀಯ ಗಂಟೆ ಗಂಟೆಗೂ ಕುತೂಹಲಕ್ಕೆ ಕಾರಣವಾಗುತ್ತಿದೆ. ಈ ನಡುವೆ ಶಿವಸೇನೆಯ 16 ಜನ ಬಂಡಾಯ ಶಾಸಕರಿಗೆ ವಿಧಾನಸಭೆಯ ಉಪ ಸ್ಪೀಕರ್ ಅನರ್ಹತೆಯ ನೋಟಿಸ್ ಜಾರಿ ಮಾಡಿದ್ದಾರೆ. ಹೀಗಾಗಿ, ಮುಂದೆ ಇದು ಯಾವ ಹಂತ ತಲುಪುತ್ತದೆ ಎಂಬುದರ ಬಗ್ಗೆ ಕುತೂಹಲ ಮೂಡಿದೆ.

ಸಿಎಂ ಉದ್ಧವ್​ ಠಾಕ್ರೆ ವಿರುದ್ಧ ಬಂಡಾಯ ಸಾರಿರುವ ಏಕನಾಥ ಶಿಂಧೆ ನೇತೃತ್ವದ ಸುಮಾರು 38 ಶಾಸಕರು ಗುವಾಹಟಿಯಲ್ಲಿ ಬೀಡು ಬಿಟ್ಟಿದ್ದಾರೆ. ಇದೀಗ ಈ ಬಣದಲ್ಲಿರುವ 16 ಶಾಸಕರಿಗೆ ಮಹಾರಾಷ್ಟ್ರ ಉಪ ಸ್ಪೀಕರ್ ಅನರ್ಹತೆಯ ನೋಟಿಸ್ ಜಾರಿಗೊಳಿಸಿದ್ದಾರೆ. ಅಲ್ಲದೇ, ಎಲ್ಲ 16 ಶಾಸಕರು ಜೂನ್ 27ರ ಸೋಮವಾರದೊಳಗೆ ನೋಟಿಸ್​ಗೆ ತಮ್ಮ ಲಿಖಿತ ಉತ್ತರಗಳನ್ನು ಸಲ್ಲಿಸಬೇಕೆಂದು ಸೂಚಿಸಿದ್ದಾರೆ.

Share Post