NationalPolitics

ಡಿ.ಕೆ.ಶಿವಕುಮಾರ್‌ಗೆ ಕೋರ್ಟ್‌ನಿಂದ ಸಮನ್ಸ್‌; ಜುಲೈ 1ರಂದು ಹಾಜರಾಗಲು ಸೂಚನೆ

ದೆಹಲಿ; ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಜನಪ್ರತಿನಿಧಿಗಳ ನ್ಯಾಯಾಲಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿ ಐದು ಮಂದಿಗೆ ಸಮನ್ಸ್‌ ನೀಡಿದೆ. ಜುಲೈ 5 ರಂದು ಖುದ್ದಾಗಿ ಕೋರ್ಟ್‌ ಹಾಜರಾಗಬೇಕೆಂದು ಕೋರ್ಟ್‌ ಸೂಚನೆ ನೀಡಿದೆ.

ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಜಾರಿ ನಿರ್ದೇಶನಾಲಯ ಇತ್ತೀಚೆಗೆ ಕೋರ್ಟ್‌ನಲ್ಲಿ ಚಾರ್ಜ್‌ ಶೀಟ್‌ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ಕೋರ್ಟ್‌, ಡಿ.ಕೆ.ಶಿವಕುಮಾರ್‌, ಸಚಿನ್‌ ನಾರಾಯಣ್‌, ಸುನಿಲ್‌ ಕುಮಾರ್‌ ಶರ್ಮಾ, ಆಂಜನೇಯ ಹನುಮಂತಯ್ಯ ಹಾಗೂ ರಾಜೇಂದ್ರ ಅವರಿಗೆ ಸಮನ್ಸ್‌ ಜಾರಿ ಮಾಡಿದೆ.

Share Post