National

ದೇಗುಲದಲ್ಲಿ ಕಸ ಗುಡಿಸಿ ಪೂಜೆ ಸಲ್ಲಿಸಿದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ

ಮಯೂರ್‌ಭಂಜ್; ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ತನ್ನ ಅಭ್ಯರ್ಥಿಯಾಗಿ ಜಾರ್ಖಂಡ್‌ ಮಾಜಿ ರಾಜ್ಯಪಾಲರು ಹಾಗೂ ಬುಡಕಟ್ಟು ಜನಾಂಗದ ಮಹಿಳೆ ದ್ರೌಪದಿ ಮುರ್ಮು ಅವರನ್ನು ಕಣಕ್ಕಿಳಿಸುತ್ತಿದೆ. ನಿನ್ನೆ ಇವರ ಹೆಸರು ಘೋಷಣೆಯಾಗುತ್ತಿದ್ದಂತೆ, ರಾಯರಂಗಪುರದಲ್ಲಿ ಸಂಭ್ರಮ ಮನೆ ಮಾಡಿದೆ. 

  ಇನ್ನು ಇದನ್ನು ನಿರೀಕ್ಷೆಯೂ ಮಾಡದಿದ್ದ ದ್ರೌಪದಿ ಮುರ್ಮು ಅವರಿಗೂ ಸಂಸತವುಂಟಾಗಿದೆ. ದ್ರೌಪದಿಯವರು ಇಂದು ಬೆಳಗ್ಗೆ ರಾಯರಂಗಾಪುರದ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅವರೇ ಪೊರಕೆ ಹಿಡಿದು ದೇವಾಲಯವನ್ನು ಸ್ವಚ್ಛಗೊಳಿಸಿದರು. ನಂತರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

Share Post