NationalPolitics

ಮುಂಬೈಗೆ ಬಂದಿಳಿದ ಏಕನಾಥ್‌ ಶಿಂಧೆ; ಸರ್ಕಾರ ರಚನೆ ಹಕ್ಕು ಮಂಡಿಸಲಿರುವ ಫಡ್ನವಿಸ್‌

ಮುಂಬೈ; ಶಿವಸೇನೆ ಬಂಡಾಯ ಶಾಸಕರ ಗುಂಪಿನ ನಾಯಕ ಏಕನಾಥ್‌ ಶಿಂಧೆ ಮುಂಬೈಗೆ ಆಗಮಿಸಿದ್ದಾರೆ. ೪೯ ಶಾಸಕರ ಬೆಂಬಲ ಪತ್ರದೊಂದಿಗೆ ಅವರು ಗೋವಾದಿಂದ ವಿಶೇಷ ವಿಮಾನದಲ್ಲಿ ಮುಂಬೈಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಇನ್ನೊಂದೆಡೆ ಏಕನಾಥ್‌ ಶಿಂಧೆ ಅವರಿಗೆ ಝೆಡ್‌ ಶ್ರೇಣಿ ಭದ್ರತೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ಈಗಾಗಲೇ ಏಕನಾಥ್‌ ಶಿಂಧೆ ನೇತೃತ್ವದ ಬಂಡಾಯ ಶಾಸಕರ ಗುಂಪು ಬಿಜೆಪಿಗೆ ಬೆಂಬಲ ಘೋಷಿಸಿದೆ. ಹೀಗಾಗಿ ಏಕನಾಥ್‌ ಶಿಂಧೆ ಅವರು ಮುಂಬೈ ವಿಮಾನ ನಿಲ್ದಾಣದಿಂದ ನೇರವಾಗಿ ಬಿಜೆಪಿ ನಾಯಕ ಫಡ್ನವಿಸ್‌ ಅವರನ್ನು ಭೇಟಿಯಾಗಲಿದ್ದಾರೆ. ಅನಂತರ ಇಬ್ಬರೂ ರಾಜ್ಯಪಾಲರನ್ನು ಭೇಟಿಯಾಗಲಿದ್ದು, ಸರ್ಕಾರ ರಚನೆಗೆ ಅನುಮತಿ ಕೋರಲಿದ್ದಾರೆ. ಮೂಲಗಳ ಪ್ರಕಾರ ಫಡ್ನವಿಸ್‌ ಮುಖ್ಯಮಂತ್ರಿಯಾಗಿಯೂ, ಏಕನಾಥ್‌ ಶಿಂಧೆ ಉಪಮುಖ್ಯಮಂತ್ರಿಯಾಗಿಯಾಗಿಯೂ ಪ್ರಮಾಣ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ನಾಳೆಯೇ ಈ ಪ್ರಮಾಣವಚನ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ.

Share Post