CrimeNational

ತಮಿಳುನಾಡಿನಲ್ಲಿ ಕಾವೇರಿಗಾಗಿ ಹೋರಾಟ; ಎಂಟು ಜಿಲ್ಲೆ ಬಂದ್‌

ಚೆನ್ನೈ; ಕಾವೇರಿಗಾಗಿ ತಮಿಳುನಾಡಿನಲ್ಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ತಮಿಳುನಾಡಿನ ಎಂಟು ಜಿಲ್ಲೆಗಳ ಬಂದ್‌ಗೆ ಕರೆ ನೀಡಲಾಗಿದೆ. ಸರಿಯಾಗಿ ನೀರು ಪೂರೈಕೆ ಮಾಡದಿದ್ದರಿಂದ ಬೆಳೆಗಳು ಒಣಗುತ್ತಿದೆ ಎಂದು ತಮಿಳುನಾಡಿನ ರೈತರು ಈ ಬಂದ್‌ಗೆ ಕರೆ ಕೊಟ್ಟಿದ್ದಾರೆ. 

ತಂಜಾವೂರು, ತಿರುಚ್ಚಿ, ತಿರುವರೂರ್, ನಾಗಪಟ್ಟಿಣಂ, ಪುದುಕೊಟ್ಟೈ, ಮೈಲಾಡುತುರೈ, ಕಡಲೂರು ಮತ್ತು ಅರಿಯಲೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಬಂದ್‌ ನಡೆಸಲಾಗುತ್ತಿದೆ. ಬಹುತೇಕ ಕಡೆ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಲಾಗಿದೆ. ಕಾವೇರಿ ಡೆಲ್ಟಾ ರಕ್ಷಣಾ ಆಂದೋಲನ ಈ ಬಂದ್‌ಗೆ ಕರೆ ಕೊಟ್ಟಿದೆ. ನಾಗಪಟ್ಟಣಂನಲ್ಲಿಯೂ ರೈತ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.

Share Post