National

ಕಲ್ಯಾಣ ಮಂಟಪದಲ್ಲಿ ಬೆಂಕಿ ಆಕಸ್ಮಿಕ; ಬೆಂಕಿಯ ಕೆನ್ನಾಲಿಗೆಗೆ ಎಲ್ಲವೂ ಭಸ್ಮ

ದೆಹಲಿ: ದೆಹಲಿಯ ರೋಹಿಣಿ ಸೆಕ್ಟರ್‌ 11ರಲ್ಲಿ ಕಲ್ಯಾಣ ಮಂಟಪವೊಂದು ಬೆಂಕಿಗೆ ಆಹುತಿಯಾಗಿದೆ. ಆಕಸ್ಮಿಕವಾಗಿ ಕಲ್ಯಾಣ ಮಂಪಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದು ಕ್ಷಣಾರ್ಧದಲ್ಲೇ ದೊಡ್ಡ ಮಟ್ಟದಲ್ಲಿ ಹರಡಿದೆ. ಮುಗಿಲೆತ್ತರಕ್ಕೆ ಬೆಂಕಿ ಆವರಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡಲಾಗಿದೆ. ಘಟನೆಯಲ್ಲಿ ಎರಡು ಕಾರುಗಳು ಸಂಪೂರ್ಣ ಭಸ್ಮವಾಗಿವೆ.

ಘಟನೆಗೆ ಕಾರಣ ತಿಳಿದುಬಂದಿಲ್ಲ. ಸಾವುನೋವಿನ ಬಗ್ಗೆ ಯಾವುದೇ ವರದಿಯಾಗಿಲ್ಲ. ಸ್ಥಳಕ್ಕೆ ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

 

Share Post