CrimeNational

ತಿರುವನಂತಪುರದಲ್ಲಿ ಒಂದೇ ಕುಟುಂಬದ ಐವರು ನಿಗೂಢ ಸಾವು!

ತಿರುವನಂತಪುರಂ; ಒಂದೇ ಕುಟುಂಬದ ಐದು ಮಂದಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಕೇರಳದ ತಿರುವನಂತಪುರ ಜಿಲ್ಲೆಯಲ್ಲಿ ನಡೆದಿದೆ. ಮನೆಯ ನಾಲ್ವರು ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಮನೆಯ ಹಿರಿಯರು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 

   ತಿರುವನಂತಪುರ ಜಿಲ್ಲೆಯ ಚತ್ತನ್​ಪಾರಾ ಎಂಬಲ್ಲಿ ಈ ಕುಟುಂಬದವರು ವಾಸ ಮಾಡುತ್ತಿದ್ದರು.  ಗೂಡಂಗಡಿ ಇಟ್ಟುಕೊಂಡು ಈ ಕುಟುಂಬ ಜೀವನ ಸಾಗಿಸುತ್ತಿತ್ತು. ಇದೊಂದೇ ಅವರ ಜೀವನಾಧಾರವಾಗಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪಂಚಾಯಿತಿ ಅಧಿಕಾರಿಗಳು ಬಲವಂತವಾಗಿ ಅಂಗಡಿ ಮುಚ್ಚಿಸಿದ್ದರು. ಇದರಿಂದಾಗಿ ಸಾಲದ ಸುಳಿಗೆ ಸಿಲುಕಿದ್ದ ಕುಟುಂಬ, ಮಾನಸಿಕವಾಗಿ ನೊಂದಿತ್ತು. ಈ ಕಾರಣದಿಂದಾಗಿಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

   ಖಿನ್ನತೆಗೆ ಒಳಗಾಗಿದ್ದ ಕುಟುಂಬಸ್ಥರು ಎರಡು ದಿನಗಳ ಹಿಂದೆ ಸಾವಿಗೀಡಾಗಿದ್ದಾರೆ. ಇಡೀ ಕುಟುಂಬಸ್ಥರು ಮನೆಯಿಂದ ಹೊರಬಾರದೇ ಇದ್ದಾಗ ನೆರೆಹೊರೆಯವರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ನಿಜವಾಗಲೂ ಇದು ಆತ್ಮಹತ್ಯೆಯಾ ಅಥವಾ ಇದರ ಹಿಂದೆ ಯಾರಾದರೂ ಇದ್ದಾರಾ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

Share Post