National

ಉಕ್ರೇನ್‌ನಿಂದ ಬಂದ ವಿದ್ಯಾರ್ಥಿಗಳ ಶಿಕ್ಷಣ ಪೂರ್ಣಗೊಳಿಸಲು ಸಹಾಯ; ಕೇಂದ್ರ ಸರ್ಕಾರ

ನವದೆಹಲಿ: ಉಕ್ರೇನ್‌ನಲ್ಲಿ ರಷ್ಯಾ ಯುದ್ಧ ಘೋಷಣೆ ಮಾಡಿರುವುದರಿಂದ 20 ಸಾವಿರ ಮಂದಿ ಮೆಡಿಕಲ್‌ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿ, ಭಾರತಕ್ಕೆ ವಾಪಸ್ಸಾಗಿದ್ದಾರೆ. ಅಂತವರು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ತೆಗೆದುಕೊಳ್ಳಬಹುದಾದ ಕ್ರಮಗಳನ್ನು ಪರಿಶೀಲಿಸುವುದಾಗಿ ಕೇಂದ್ರ ಸರ್ಕಾರ ಲೋಕಸಭೆಗೆ ಭರವಸೆ ನೀಡಿದೆ.

ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಆಪರೇಷನ್ ಗಂಗಾ ಮೂಲಕ ಕಾರ್ಯಾಚರಣೆ ಮಾಡಲಾಯಿತು. ಇದೀಗ ಭಾರತಕ್ಕೆ ಬಂದಿರುವ ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಲು ನೆರವಾಗುವಂತೆ ಉಕ್ರೇನ್‌ನ ನೆರೆಯ ರಾಷ್ಟ್ರಗಳ ವಿಶ್ವವಿದ್ಯಾನಿಲಯಗಳೊಂದಿಗೆ ಸರ್ಕಾರವು ‘ಮಾತುಕತೆ ನಡೆಸಲು ಅಥವಾ ಕಾರ್ಯನೀತಿ ರೂಪಿಸುವುದನ್ನು’ ಪರಿಗಣಿಸಿದೆಯೇ ಎಂಬ ಕಾಂಗ್ರೆಸ್ ಸದಸ್ಯ ಗೌರವ್ ಗೊಗೊಯಿ ಅವರ ಪ್ರಶ್ನೆಗೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಉತ್ತರಿಸಿದರು. ಉಕ್ರೇನ್‌ನಿಂದ ವಿದ್ಯಾರ್ಥಿಗಳನ್ನು ರಕ್ಷಿಸಿ ಭಾರತಕ್ಕೆ ಕರೆತಂದಿದ್ದೇವೆ. ಆಗಲೇ, ಅವರು ಭವಿಷ್ಯದಲ್ಲಿ ವೈದ್ಯರಾಗಲು ಅಗತ್ಯವಿರುವ ಯಾವುದೇ ರೀತಿಯ ವ್ಯವಸ್ಥೆಗಳನ್ನು ಕೈಗೊಳ್ಳುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ’ ಎಂದು ಸಚಿವರು ಪ್ರತಿಕ್ರಿಯಿಸಿದರು.

Share Post