National

ಅವರು ವಿಕೃತ ಮನಸ್ಸುಗಳಲ್ಲ, ದೇಶದ್ರೋಹಿಗಳು: ಶೋಭಾ ಕರಂದ್ಲಾಜೆ

ಬಾಗಲಕೋಟೆ:  ರಾವತ್ ಸಾವಿಗೆ ವಿಕೃತ ಮನಸ್ಸುಗಳು ಸಂಭ್ರಮಿಸಿದ ವಿಚಾರವಾಗಿ ಬಾಗಲಕೋಟೆಯಲ್ಲಿ ಮಾತನಾಡಿದ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಈ ಬಗ್ಗೆ ಕೇಂದ್ರ ಸರ್ಕಾರದ ಗೃಹ ಇಲಾಖೆ ಮತ್ತು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು, ಇಂಥವರಿಗೆ ಕಠಿಣವಾದ ಶಿಕ್ಷೆ ಕೊಡಬೇಕೆಂಬುದು  ಜನರ ಆಗ್ರಹವಾಗಿದೆ.
ಇದರಲ್ಲೇನು ರಾಜಕೀಯವಿಲ್ಲ, ಅವರ ಸಾವನ್ನು ಸಂಭ್ರಮಿಸುವವರು ವಿಕೃತ ಮನಸುಗಳಲ್ಲ, ದೇಶದ್ರೋಹಿಗಳು ಅವರು ಎಂದಿಗೂ ದೇಶಕ್ಕೆ ಮಾರಕವಾಗಿಯೇ ಇರ್ತಾರೆ.  ಅಂತವರಿಗೆ ಪಕ್ಷ ಇಲ್ಲ, ಪಂಗಡ ಇಲ್ಲ, ಜಾತಿ ಇಲ್ಲ, ಪಂಥ ಇಲ್ಲ. ಅಂಥವರ ಮೇಲೆ ಉಗ್ರ ಕ್ರಮ ಕೈಗೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬದ್ಧವಾಗಿದೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

Share Post