National

ಗೋಡೆ ಕುಸಿದು 12 ಮಂದಿ ಸಾವು; ಪ್ರಧಾನಿ ಮೋದಿ ಕಳವಳ

ಮೊರಬಿ; ಗುಜರಾತ್​ನ ಮೊರಬಿ ಜಿಲ್ಲೆಯ ಹಳವಾಡದಲ್ಲಿ ಕಾರ್ಖಾನೆ ಗೋಡೆ ಕುಸಿದು ಭೀಕರ ದುರಂತ ಸಂಭವಿಸಿದೆ. ಸಾಗರ್ ಸಾಲ್ಟ್ ಎಂಬ ಕಾರ್ಖಾನೆಯಲ್ಲಿ ಈ ದುರಂತ ನಡೆದಿದ್ದು, ಗೋಡೆಯ ಅವಶೇಷಗಳಡಿ ಸಿಲುಕಿ 12 ಕಾರ್ಮಿಕರು ದಾರುಣ ಸಾವನ್ನಪ್ಪಿದ್ದಾರೆ.

      ಸುದ್ದಿ ತಿಳಿದಾಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಹಳವಾಡ ಜಿಐಡಿಸಿಗೆ ತಲುಪಿ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿ ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಮಧ್ಯಾಹ್ನ 12 ಗಂಟೆ ಸುಮಾರಿಗೆ ಗೋಡೆ ಕುಸಿದಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.

Share Post