National

ನಟಿ ಅಪಹರಣ, ದೌರ್ಜನ್ಯ ಕೇಸ್‌; ನಟ ದಿಲೀಪ್‌ಗೆ ಜಾಮೀನು

ಕೊಚ್ಚಿ: 2017ರಲ್ಲಿ ನಡೆದ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಅಧಿಕಾರಿಗಳ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ನಟ ದಿಲೀಪ್‌ಗೆ ರಿಲೀಫ್‌ ಸಿಕ್ಕಿದೆ. ಈ ಸಂಬಂಧ ದಿಲೀಪ್‌ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗೆ ಒಪ್ಪಿಗೆ ಸೂಚಿಸಿರುವ ಕೇರಳ ಹೈಕೋರ್ಟ್‌, ನಟ ದಿಲೀಪ್‌ ಹಾಗೂ ಇತರೆ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಆರೋಪಿ ದಿಲೀಪ್‌ ಹಾಗೂ ಅವರ ಸಹೋದರ ಅನೂಪ್‌ ಮತ್ತು ಇತರೆ ನಾಲ್ವರಿಗೆ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಸಿಕ್ಕಿದೆ.  2017 ರ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಅವರ ಹತ್ಯೆ ಸಂಚು ರೂಪಿಸಿದ್ದರ ಬಗ್ಗೆ ಆಡಿಯೋವೊಂದು ಬಿಡುಗಡೆಯಾಗಿತ್ತು. ಈ ಸಂಬಂಧ ದಿಲೀಪ್‌ ಹಾಗೂ ಮತ್ತಿತರರ ವಿರುದ್ಧ ಕೇಸ್‌ ದಾಖಲಿಸಲಾಗಿತ್ತು.

ಆದರೆ, ಆರೋಪಿ ಪರ ವಕೀಲರು, ಪೊಲೀಸರಿಗೆ ಆರೋಪಿ ವಿರುದ್ಧ ಸಾಕ್ಷ್ಯ ಸಂಗ್ರಹ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ, ಮತ್ತೊಂದು ಪ್ರಕರಣದಲ್ಲಿ ಸಿಲುಕಿಸಲು ಯತ್ನಿಸಲಾಗಿದೆ ಎಂದು ವಾದ ಮಂಡಿಸಿದ್ದರು.

 

Share Post