National

ಹಿಜಾಬ್‌ ವಿವಾದ ಕುರಿತ ಅರ್ಜಿಗಳ ವಿಚಾರಣೆ; ಸೋಮವಾರಕ್ಕೆ ಮುಂದೂಡಿದ ಸುಪ್ರೀಂ

ನವದೆಹಲಿ; ಶಾಲಾ ಕಾಲೇಜುಗಳಲ್ಲಿ ಹಿಜಾಬ್​ ಹೈಕೋರ್ಟ್‌ ನೀಡಿದ​ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ಮೂರನೇ ದಿನದ ವಿಚಾರಣೆ ಸುಪ್ರೀಂಕೋರ್ಟ್​ನಲ್ಲಿಂದು ನಡೆಯಿತು. ವಾದ- ಪ್ರತಿವಾದಿಗಳ ಬಳಿಕ ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ(ಸೆ.12 ರಂದು) ಮುಂದೂಡಲಾಗಿದೆ.

   ಮೊದಲ ದಿನ ವಿಚಾರಣೆಯಲ್ಲಿ ಫಿರ್ಯಾದುದಾರರ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ದೇವದತ್​ ಕಾಮತ್​ ಅವರು, ಬಟ್ಟೆಯ ವಿಚಾರದಲ್ಲಿ ಸರ್ಕಾರ ಮಕ್ಕಳ ಶಿಕ್ಷಣವನ್ನು ಹಾಳು ಮಾಡುತ್ತಿದೆ ಎಂದು ದೂರಿದ್ದರು. ಈ ವೇಳೆ ಪೀಠ, ಮಕ್ಕಳು ಶಾಲೆಯೊಳಗೆ ಮಿಡಿ, ಸ್ಕರ್ಟ್​ ಧರಿಸಿ ಬರಬಹುದೇ ಎಂದು ಪ್ರಶ್ನಿಸಿದ್ದರು. ಹೀಗಾಗಿ ಶಿಕ್ಷಣಕ್ಕೂ, ಬಟ್ಟೆಗೂ ಸಂಬಂಧವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.

ನಿನ್ನೆ ನಡೆದ ಎರಡನೇ ದಿನದ ವಿಚಾರಣೆಯಲ್ಲಿ “ಹಿಜಾಬ್​ ಧರಿಸುವುದು ಹಕ್ಕು” ಎಂದು ವಾದ ಮಂಡಿಸಿದಾಗ ಕೋರ್ಟ್​, ಧರಿಸುವ ಹಕ್ಕಿದ್ದರೆ, ಅದನ್ನು ಧರಿಸದೇ ಇರುವ ಹಕ್ಕೂ ಇದೆ ಎಂದು ನ್ಯಾಯಾಧೀಶರು ಹೇಳಿದ್ದರು. ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠ ವಿಚಾರಣೆ ನಡೆಸಿತು.

Share Post