National

HIJAB: ಬಿಜೆಪಿ ನಾಯಕರ ಕುಮ್ಮಕ್ಕಿನಿಂದಲೇ ವಿವಾದ; ರಾಜ್ಯಸಭಾ ಸದಸ್ಯ ನಾಸಿರ್‌ ಹುಸೇನ್‌

ನವದೆಹಲಿ: ಒಬ್ಬರು ಹಿಜಾಬ್‌ ಹಾಕಿಕೊಂಡರೆ ಮತ್ತೊಬ್ಬರು ಹೇಗೆ ತೊಂದರೆಯಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ನಾಸಿರ್‌ ಹುಸೇನ್‌ (nasir hussen) ಪ್ರಶ್ನೆ ಮಾಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕರು ಹಾಗೂ ಸಂಸದರ ಕುಮ್ಮಕ್ಕಿನಿಂದಲೇ ಈ ವಿವಾದ ಸೃಷ್ಟಿಯಾಗಿದೆ. ಹಿಂದೂ ಧ್ರುವೀಕರಣಕ್ಕಾಗಿ ಹಿಜಾಬ್‌ ವಿವಾದ ಸೃಷ್ಟಿ ಮಾಡಲಾಗಿದೆ ಎಂದು ನಾಸಿರ್‌ ಹುಸೇನ್‌ ಆರೋಪ ಮಾಡಿದ್ದಾರೆ.

ಕರ್ನಾಟಕದಲ್ಲಿ ಈ ಮೊದಲ ಇಂತಹ ಪರಿಸ್ಥಿತಿ ಇರಲಿಲ್ಲ. ಇದೀಗ, ಅಲ್ಲಿನ ವಾತಾವರಣವೇ ಬದಲಾಗಿದೆ. ಪದೇ ಪದೇ ಪಾಕಿಸ್ತಾನದ ಹೆಸರನ್ನು ಪ್ರಸ್ತಾಪ ಮಾಡಲಾಗುತ್ತಿದೆ. ಹಿಜಾಬ್‌ ಧರಿಸಿ ಬಂದರೂ ಆಕ್ಷೇಪ ವ್ಯಕ್ತಪಡಿಸುತ್ತಾರೆ. ಹುಡುಗಿಯರು ಜೀನ್ಸ್‌ ಧರಿಸಿ ಬಂದರೂ ಆಕ್ಷೇಪದ ಮಾತನ್ನಾಡುತ್ತಾರೆ ಎಂದು ರಾಜ್ಯಸಭಾ ಸದಸ್ಯ ನಾಸಿರ್‌ ಹುಸೇನ್‌ ಇದೇ ಸಂದರ್ಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

Share Post