NationalPolitics

ಪ್ರಧಾನಿ ಮೋದಿ ಪರಮಾತ್ಮನೇ..?; ರಾಜ್ಯಸಭೆ ವಿಪಕ್ಷ ನಾಯಕ ಖರ್ಗೆ ಪ್ರಶ್ನೆ

ನವದೆಹಲಿ; ಸಂಸತ್ತಿನಲ್ಲಿ ಕಳೆದ ಮೂರು ದಿನಗಳಿಂದ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ ನಡೆಯುತ್ತಿದೆ. ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡುವ ಸಾಧ್ಯತೆ ಇದೆ. ಆದ್ರೆ ಅದಕ್ಕೂ ಮೊದಲು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಖರ್ಗೆಯವರು ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದೆ. ಈ ಬಗ್ಗೆ ಉತ್ತರ ನೀಡಲು ಮೋದಿ ಕೈಯಲ್ಲಿ ಆಗುತ್ತಿಲ್ಲ. ಅವರು ಸಂಸತ್ತಿಗೆ ಹಾಜರಾಗಲು ಸಿದ್ಧರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಏನು ಭಗವಂತನೇ, ಪರಮಾತ್ಮನೇ ಎಂದೂ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಇದರಿಂದಾಗಿ ಸದನದಲ್ಲಿ ಗದ್ದಲ ಶುರುವಾಯಿತು. ಹೀಗಾಗಿ ಕೆಲಕಾಲ ಕಲಾಪವನ್ನು ಮುಂದೂಡಲಾಯಿತು.

 

Share Post