National

ನಾಳೆ ಆಮ್‌ ಆದ್ಮಿ ಪಾರ್ಟಿ ಸೇರಲಿರುವ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌

ನವದೆಹಲಿ: ಕಳೆದ ವಾರವಷ್ಟೇ ನಿವೃತ್ತಿ ಪಡೆದುಕೊಂಡಿದ್ದ ಐಪಿಎಸ್‌ ಅಧಿಕಾರಿ ಬಿ.ಭಾಸ್ಕರ್‌ ರಾವ್‌ ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯಕ್ಕೆ ಧಮುಕಲು ತುದಿಗಾಲಲ್ಲಿ ನಿಂತಿದ್ದಾರೆ. ನಾಳೆ ಅವರು ದೆಹಲಿಯ ಎಎಪಿ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.

2021ರ ಸೆಪ್ಟೆಂಬರ್‌ನಲ್ಲೇ ಅವರು ಅವಧಿಪೂರ್ವ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ವಾರದ ಹಿಂದೆ ಅದು ಅಂಗೀಕಾರವಾಗಿದೆ. ಈ ಹಿನ್ನೆಲೆಯಲ್ಲಿ ಅವರು ರಾಜಕೀಯ ಸೇರಲು ದಾರಿ ಸುಗಮವಾಗಿದೆ. ನಾಳೆ ನಡೆಯುವ ಸಮಾರಂಭದಲ್ಲಿ ಎಎಪಿ ಪಕ್ಷದ ಹಿರಿಯ ಮುಖಂಡ‌ ಮನೀಷ್ ಸಿಸೋಡಿಯಾ‌ ಮತ್ತಿತರರು ಹಾಜರಿರಲಿದ್ದಾರೆ ಎಂದು ತಿಳಿದುಬಂದಿದೆ.

Share Post