National

ಕೇದಾರನಾಥನ ದರ್ಶನಕ್ಕೆ ಮಳೆರಾಯನ ಅಡ್ಡಿ; ಯಾತ್ರೆ ತಾತ್ಕಾಲಿಕ ಸ್ಥಗಿತ

ಡೆಹ್ರಾಡೂನ್; ಕೇದಾರನಾಥ ಸುತ್ತಮುತ್ತ ಕಳೆದ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಹೀಗಾಗಿ ಈ ಭಾಗದಲ್ಲಿ ಭಾರಿ ಮುಂಜಾಗ್ರತೆ ಕೈಗೊಳ್ಳಲಾಗಿದೆ. ಮಳೆ ಕಾರಣದಿಂದಾಗಿ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.

ಭಾರಿ ಮಳೆಯಿಂದಾಗಿ ಪ್ರತಿಕೂಲ ಪರಿಸ್ಥಿತಿ ಇದೆ. ಈ ಹಿಂದೆ ಹಲವು ಬಾರಿ ಭಾರಿ ಮಳೆಯಿಂದಾಗಿ ಕೇದಾರನಾಥದಲ್ಲಿ ಭೀಕರ ಪರಿಸ್ಥಿತಿ ಏರ್ಪಟ್ಟಿತ್ತು. ಹಲವು ಭಕ್ತರು ಮೃತಪಟ್ಟಿದ್ದರು. ಇದನ್ನು ಗಮನದಲ್ಲಿಟ್ಟುಕೊಂಡು ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಸೋಮವಾರ ಯಾತ್ರೆ ಕೈಗೊಂಡಿದ್ದ ಭಕ್ತರು ಗೌರಿಕುಂಡ್ ಮತ್ತು ಕೇದಾರನಾಥ ಮಧ್ಯೆ ವಿವಿಧೆಡೆ ಶಿಬಿರಗಳಲ್ಲಿ ತಂಗಿದ್ದಾರೆ.

ಇನ್ನು ನಿನ್ನೆಕೆಲ ಭಕ್ತರಿಗೆ ಕೇದಾರನಾಥನ ದರ್ಶನ ಸಿಕ್ಕಿದೆ. ಆದ್ರೆ ಅವರು ವಾಪಸ್‌ ಬರುಲು ಆಗುತ್ತಿಲ್ಲ. ಅವರನ್ನು ಅಲ್ಲೇ ಉಳಿಸಿಕೊಳ್ಳಲಾಗಿದೆ. ಗೌರಿಕುಂಡದಿಂದ ಪ್ರಯಾಣ ಆರಂಭಿಸಬೇಕಿದ್ದವರನ್ನೂ ಅಲ್ಲಿಯೇ ಇರುವಂತೆ ತಿಳಿಸಲಾಗಿದೆ.

Share Post