National

ರಾಮಜನ್ಮಭೂಮಿ ಆಂದೋಲನದ ನಾಯಕ ಸ್ವಾಮಿ ಧರ್ಮೇಂದ್ರ ಇನ್ನಿಲ್ಲ

ಜೈಪುರ್; ರಾಮಜನ್ಮಭೂಮಿ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆಚಾರ್ಯ ಸ್ವಾಮಿ ಧರ್ಮೇಂದ್ರ ಇಂದು ಬೆಳಗ್ಗೆ ನಿಧನರಾಗಿದ್ದಾರೆ.  ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಸವಾಯ್ ಮಾನ್ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

   ಬಹು ಅಂಗಾಂಗ ವೈಫಲ್ಯದಿಂದ ಆಚಾರ್ಯ ಸ್ವಾಮಿ ಧರ್ಮೇಂದ್ರ ತೀವ್ರ ಅನಾರೋಗ್ಯಕ್ಕೀಡಾಗಿದ್ದರು. ಹೀಗಾಗಿ ಅವರನ್ನು ತುರ್ತು ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಒಂದು ತಿಂಗಳಿನಿಂದ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.

    ವಿಶ್ವ ಹಿಂದೂ ಪರಿಷತ್ತಿನ ಮಾರ್ಗದರ್ಶಕ ಮಂಡಲದಲ್ಲಿದ್ದ ಇವರು ರಾಮಜನ್ಮಭೂಮಿ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಹೆಸರಿಸಲಾಗಿದ್ದ ಎಲ್ಲ 32 ಆರೋಪಿಗಳು ನಿರ್ದೋಷಿ ಎಂದು ವಿಶೇಷ ಸಿಬಿಐ ನ್ಯಾಯಾಲಯ ನೀಡಿದ ತೀರ್ಪಿಗೆ ಆಚಾರ್ಯ ಧರ್ಮೇಂದ್ರ ಸಂತಸ ವ್ಯಕ್ತಪಡಿಸಿದ್ದರು.

Share Post