National

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ಡಿ.14ಕ್ಕೆ ಉಭಯ ಸಿಎಂಗಳ ಸಭೆ

ನವದೆಹಲಿ; ಮಹಾರಾಷ್ಟ್ರ ಹಾಗೂ ಕರ್ನಾಟಕ ನಡುವಿನ ಗಡಿ ವಿವಾದ ಶಮನಗೊಳಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ, ಡಿಸೆಂಬರ್‌ 14ರಂದು ಕರ್ನಾಟಕ –ಮಹಾರಾಷ್ಟ್ರ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ. ಸಂಧಾನ ಸಭೆ ಇದಾಗಿದ್ದು, ಇಬ್ಬರೂ ಮುಖ್ಯಮಂತ್ರಿಗಳ ಮನವೊಲಿಸಲಿದ್ದಾರೆ.

ಗಡಿ ವಿವಾದ ಕುರಿತಂತೆ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ಮೈತ್ರಿಕೂಟದ ನಿಯೋಗ ಅಮಿತ್‌ ಷಾ ಶಾ ಅವರನ್ನು ಭೇಟಿಯಾಗಿತ್ತು. ಅನಂತರ ಎನ್‌ಸಿಪಿ ನಾಯಕ ಅಮೋಲ್ ಕೊಲ್ಹೆ, ಎರಡೂ ರಾಜ್ಯಗಳ ಸಿಎಂಗಳ ಜೊತೆ ಮಾತನಾಡುವುದಾಗಿ ಶಾ ಹೇಳಿದ್ದಾರೆ ಎಂದು ತಿಳಿಸಿದರು. ನಮ್ಮ ಅಹವಾಲುಗಳನ್ನು ಅಮಿತ್‌ ಶಾ ಅವರು ತಾಳ್ಮೆಯಿಂದ ಆಲಿಸಿದರು. ಸೌಹಾರ್ದ ಪರಿಹಾರಕ್ಕಾಗಿ ಡಿಸೆಂಬರ್‌ 14ರಂದು ಸಭೆ ನಡೆಸುತ್ತೇನೆ ಎಂದು ಅಮಿತ್‌ ಶಾ ಹೇಳಿದರು ಎಂದು ಅವರು ಹೇಳಿದ್ದಾರೆ.

ಗುರುವಾರ ಶಾ ಅವರಿಗೆ ಪತ್ರ ಬರೆದಿದ್ದ ಮೈತ್ರಿಕೂಟ ಮಹಾವಿಕಾಸ ಆಘಾಡಿಯ ಸಂಸದರು, ‘ಕರ್ನಾಟಕ–ಮಹಾರಾಷ್ಟ್ರ ಗಡಿ ಸಮಸ್ಯೆ ತೀವ್ರವಾಗಿದೆ. ಯಾವುದೇ ವೇಳೆ ಹಿಂಸೆ ಭುಗಿಲೇಳಬಹುದು. ತಕ್ಷಣ ಮಧ್ಯಪ್ರವೇಶಿಸಬೇಕು’ ಎಂದು ಕೋರಿದ್ದರು

Share Post