DistrictsNational

ಕನ್ನಡಿಗರ ಮೇಲೆ ದಾಳಿ: ಕರ್ನಾಟಕ-ಮಹಾರಾಷ್ಟ್ರ ಬಸ್‌ ಸಂಚಾರ ಸ್ಥಗಿತ

ಬೆಳಗಾವಿ: ನಗರದಲ್ಲಿ ಉದ್ವಿಗ್ನದ ಪರಿಸ್ಥಿತಿ  ನಿರ್ಮಾಣ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ತೆರಳುವ ಬಸ್‌ಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಈಗಾಗಲೇ ಶಿವಸೇನೆ ಪುಂಡರು ಮೀರಜ್‌ ಪಟ್ಟಣದಲ್ಲಿ ಕನ್ನಡಿಗರ ಹೋಟೆಲ್‌, ವಾಹನಗಳ ಹಾಗೂ ಅಂಗಡಿಗಳನ್ನು ಧ್ವಂಸ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಸ್‌ ಸಂಚಾರವನ್ನು ನಿಷೇಧಿಸಲಾಗಿದೆ.
ಇನ್ನು ಕರ್ನಾಟಕದಿಂದ ಯಾವುದೇ ಬಸ್‌ಗಳು ಮಹಾರಾಷ್ಟ್ರಕ್ಕೆ ಹೋಗುತ್ತಿಲ್ಲ. ಹಾಗೆಯೇ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುತ್ತಿಲ್ಲ. ಇದ್ದರಿಂದಾಗಿ ಪ್ರಯಾಣಿಕರಿಗೆ ತೀವ್ರ ಸಮಸ್ಯೆ ಉಂಟಾಗಿದೆ.

Share Post