National

ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ, ರಾಜ್ಯಪಾಲ ಭಗತ್‌ ಸಿಂಗ್‌ಗೆ ಕೊವಿಡ್‌ ಪಾಸಿಟಿವ್‌

ಮುಂಬೈ; ಮಹಾರಾಷ್ಟ್ರ ಸರ್ಕಾರದಲ್ಲಿ ಅಸ್ಥಿರತೆ ಉಂಟಾಗಿದೆ. ಸರ್ಕಾರದ ವಿರುದ್ಧ ಬಂಡೆದ್ದಿರುವ ನವಲತ್ತಕ್ಕೂ ಹೆಚ್ಚು ಶಾಸಕರು ರೆಸಾರ್ಟ್‌ನಲ್ಲಿ ತಂಗಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ಅವರಿಗೆ ಕೊವಿಡ್‌ ಇರುವುದು ದೃಢಪಟ್ಟಿದ್ದು, ಕ್ವಾರಂಟೀನ್‌ನಲ್ಲಿದ್ದಾರೆ. ಈ ವಿಚಾರವನ್ನು ಎಐಸಿಸಿ ವೀಕ್ಷಕರಾಗಿ ಆಗಮಿಸಿರುವ ಕಾಂಗ್ರೆಸ್‌ ನಾಯಕ ಕಮಲ್‌ ನಾಥ್‌ ಹೇಳಿದ್ದಾರೆ.

ಇನ್ನು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರು ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗೆ ಕೋವಿಡ್ ಪಾಸಿಟಿವ್ ಆಗಿದ್ದು, ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಮುಂಬೈನ ಎಚ್‌ಎನ್‌ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

 

Share Post