National

ಮಹಾರಾಷ್ಟ್ರದಲ್ಲೂ ಮಳೆಯ ಅಬ್ಬರ; ಭೂಕುಸಿತಕ್ಕೆ ಓರ್ವ ಬಲಿ

ಮುಂಬೈ; ಮಹಾರಾಷ್ಟ್ರದಲ್ಲಿ ಕೂಡಾ ಮಳೆರಾಯ ರೌದ್ರಾವತಾರ ತಾಳಿದ್ದಾನೆ. ಪಾಲ್ಘರ್‌‌ ಜಿಲ್ಲೆಯ ವಸಯಿ ಪಟ್ಟಣದಲ್ಲಿ ಭೂಕುಸಿತದ ಉಂಟಾಗಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ರೋಶ್ನಿ ಸಿಂಗ್ (16) ಅವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಸ್ಥಳಕ್ಕೆ ಧಾವಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಹಾಗೂ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಮುಂಜಾನೆ 6.30ರ ಹೊತ್ತಿಗೆ ಭೂಕುಸಿತ ಸಂಭವಿಸಿದ್ದು, ಮೃತಪಟ್ಟ ವ್ಯಕ್ತಿಯನ್ನು ಅನಿಲ್ ಸಿಂಗ್ (45) ಎಂದು ಗುರುತಿಸಲಾಗಿದೆ. ಅವರ ಪತ್ನಿ ವಂದನಾ ಸಿಂಗ್ (40) ಹಾಗೂ ಪುತ್ರ ಓಂ ಸಿಂಗ್ (12) ಅವರನ್ನು ರಕ್ಷಿಸಲಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Share Post