National

ಪಂಜಾಬ್‌ನಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸ; ದುಷ್ಕರ್ಮಿಗಳ ವಿರುದ್ಧ ಆಕ್ರೋಶ

ಬಟಿಂಡಾ; ಪಂಜಾಬ್‌ನ ಬಟಿಂಡಾದ ರಮ್ಮನ್ ಮಂಡಿಯ ಸಾರ್ವಜನಿಕ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.

ಶುಕ್ರವಾರ ಮಧ್ಯರಾತ್ರಿ ಅಪರಿಚಿತರು ಪ್ರತಿಮೆಯನ್ನು ಧ್ವಂಸ ಮಾಡಿ ಪರಾರಿಯಾಗಿದ್ದಾರೆ. ಸ್ಥಳೀಯರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ರಮ್ಮನ್ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದ್ದು, ಠಾಣಾಧಿಕಾರಿ ಹರ್ಜೋತ್ ಸಿಂಗ್ ಮಾನ್ ಅವರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Share Post