CrimeNational

ನಾಳೆ ವಿನಾಯಿತಿ ನೀಡಿ; ಸೋಮವಾರ ವಿಚಾರಣೆಗೆ ರಾಹುಲ್‌ ಪತ್ರ

ನವದೆಹಲಿ: ಈಗಾಗಲೇ ಮೂರು ದಿನಗಳ ಕಾಲ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಾಳೆಯೂ ವಿಚಾರಣೆಗೆ ಬರುವಂತೆ ರಾಹುಲ್‌ ಗಾಂಧಿಗೆ ಸೂಚಿಸಿದ್ದರು. ಆದ್ರೆ, ರಾಹುಲ್‌ ಗಾಂಧಿ ನಾಳೆಯ ವಿಚಾರಣೆಯಿಂದ ವಿನಾಯಿತಿ ನೀಡುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಇಡಿ ಅಧಿಕಾರಿಗಳಿಗೆ ಪತ್ರ ಬರೆದಿರುವ ರಾಹುಲ್‌ ಗಾಂಧಿ, ಭಾನುವಾರ ನನ್ನ ಹುಟ್ಟುಹಬ್ಬವಿದೆ. ಹೀಗಾಗಿ ಮೂರು ದಿನ ವಿಚಾರಣೆಗೆ ವಿನಾಯಿತಿ ನೀಡಿ. ಸೋಮವಾರ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ. ಈ ನಡುವೆ ಕಾಂಗ್ರೆಸ್‌ನ ಎಲ್ಲಾ ಸಂಸದರು ಸೋಮವಾರ ದೆಹಲಿಗೆ ಬರುವಂತೆಯೂ ರಾಹುಲ್‌ ಗಾಂಧಿ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

 

Share Post