National

ಅಗ್ನಿಪಥ್‌ ಕಿಚ್ಚಿಗೆ ವ್ಯಕ್ತಿ ಸಾವು; ಹೈದರಾಬಾದ್‌ನಲ್ಲಿ ಮೆಟ್ರೋ ಸಂಚಾರ ಬಂದ್‌

ಹೈದರಾಬಾದ್‌; ಸೇನಾ ನೇಮಕಾತಿಯಲ್ಲಿ ಅಗ್ನಿಪಥ್‌ ಯೋಜನೆಯನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇತ್ತ ಹೈದರಾಬಾದ್‌ನಲ್ಲೂ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಪ್ರತಿಭಟನಾಕಾರರು ಇಂದು ಬೆಳಗ್ಗೆ ಸಿಕಂದ್ರಾಬಾದ್‌ನ ರೈಲ್ವೆ ಸ್ಟೇಷನ್‌ನಲ್ಲಿ ಒಂದು ರೈಲಿಗೆ ಬೆಂಕಿ ಹಚ್ಚಲಾಗಿತ್ತು. ಅನಂತರ ಕಲ್ಲು ತೂರಾಟ ಕೂಡಾ ನಡೆಸಲಾಗಿತ್ತು. ಈ ವೇಳೆ ಪ್ರತಿಭಟನಾಕಾರರ ದಾಳಿಗೆ ಸಿಲುಕಿ ವಾರಂಗಲ್‌ನ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಇನ್ನು ಹೈದರಾಬಾದ್‌ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮುಂದಿನ ಆದೇಶದವರೆಗೆ ಹೈದರಾಬಾದ್‌ನಲ್ಲಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

Share Post