National

ಮೇಕೆದಾಟು ಯೋಜನೆ ವಿಚಾರ; ತಮಿಳುನಾಡು ಸಲ್ಲಿಸಿದ್ದ ಅರ್ಜಿ ಮುಂದೂಡಿಕೆ

ನವದೆಹಲಿ; ಮೇಕೆದಾಟು ಆಣೆಕಟ್ಟು ಯೋಜನೆ ಸಂಬಂಧ ತಮಿಳುನಾಡು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಜುಲೈ 26ಕ್ಕೆ ಮುಂದೂಡಿದೆ. ಯೋಜನೆಯ ಸಮಗ್ರ ಯೋಜನಾ ವರದಿ ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸದಂತೆ ನಿರ್ದೇಶನ ನೀಡಬೇಕೆಂದು ತಮಿಳುನಾಡು ಮನವಿಯಾಗಿದೆ. ಈ ಸಂಬಂಧ ಇಂದು ಅರ್ಜಿ ಕೈಗೆತ್ತಿಕೊಂಡ ಕೋರ್ಟ್‌, ವಿಚಾರಣೆಯನ್ನು ಮುಂದೂಡಿದೆ.

 

ವಿಚಾರಣೆ ನಡೆಸಿದ ನ್ಯಾ. ಎ.ಎಂ. ಕಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ, ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿತು. ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆ ಬಾಕಿ ಉಳಿದ ಹಿನ್ನೆಲೆಯಲ್ಲಿ ಜು. 22ರಂದು ನಿಗದಿಯಾಗಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಡಿಪಿಆರ್ ಬಗ್ಗೆ ಚರ್ಚಿಸಲ್ಲ, ಚರ್ಚೆ ಮುಂದೂಡಲು ಮನವಿ ಮಾಡುತ್ತೇವೆ ಎಂದು ಕರ್ನಾಟಕ, ತಮಿಳುನಾಡು ಸರ್ಕಾರ ಪರ ವಕೀಲರು ಕೋರ್ಟ್‍ಗೆ ತಿಳಿಸಿದರು. ಇದಕ್ಕೆ ಕೋರ್ಟ್ ಸಮ್ಮತಿ ಸೂಚಿಸಿತು.

 

Share Post