National

ಸೇನಾ ಹೆಲಿಕಾಪ್ಟರ್‌ ದುರಂತ; ಸಂಜೆ 6.30ಕ್ಕೆ ಪ್ರಧಾನಿ ಮೋದಿ ಸಭೆ

ನವದೆಹಲಿ: ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್‌ ಪತನವಾಗಿ ದುರಂತ ನಡೆದಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಜೆ 6.30ಕ್ಕೆ ಸಂಪುಟ ರಕ್ಷಣಾ ಸಮಿತಿ ಸಭೆ ಕರೆದಿದ್ದಾರೆ. ಸಭೆಯಲ್ಲಿ ದುರಂತದ ಬಗ್ಗೆ ರಕ್ಷಣಾ ಸಮಿತಿ ಸದಸ್ಯರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಬೆಳಗ್ಗೆ ತಮಿಳುನಾಡಿ ವೆಲ್ಲಿಂಗ್ಟನ್‌ ಸೇನಾ ಕಾಲೇಜಿನಲ್ಲಿ ಉಪನ್ಯಾಸ ನೀಡಲು ಸೇನಾ ಮುಖ್ಯಸ್ಥ ಬಿಪಿನ್‌ ರಾವತ್‌ ಹಾಗೂ ಇತರ 13 ಮಂದಿ ಹೆಲಿಕಾಪ್ಟರ್‌ ನಲ್ಲಿ ತೆರಳುತ್ತಿದ್ದರು. ಈ ವೇಳೆ ಸೂಲೂರು ಬಳಿ ಹೆಲಿಕಾಪ್ಟರ್‌ ಪತನವಾಗಿ ದುರಂತ ನಡೆದಿದೆ. ಘಟನೆಯಲ್ಲಿ ಒಬ್ಬರು ಬಿಟ್ಟು ಎಲ್ಲರೂ ಮೃತಪಟ್ಟಿದ್ದಾರೆ.

Share Post