NationalPolitics

ಸುಧಾಕರ್‌ ಟ್ವೀಟ್‌ಗೆ ಸಿಡಿದೆದ್ದ ಎಂಟಿಬಿ ನಾಗರಾಜ್‌; ಸಿದ್ದರಾಮಯ್ಯ ಪರ ಬ್ಯಾಟಿಂಗ್‌

ಬೆಂಗಳೂರು; ಸಮ್ಮಿಶ್ರ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯ ಕಾರಣ ಎಂಬ ಮಾಜಿ ಸಚಿವ ಸುಧಾಕರ್‌ ಟ್ವೀಟ್‌ಗೆ ಮಾಜಿ ಸಚಿವ ಎಂಟಿಬಿ ನಾಗರಾಜ್‌ ಸಿಡಿದೆದ್ದು, ಕುತೂಹಲಕ್ಕೆ ಕಾರಣವಾಗಿದೆ. ಸಮ್ಮಿಶ್ರ ಸರ್ಕಾರದ ಸಮಯದಲ್ಲಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಸಿದ್ದರಾಮಯ್ಯ ಬಳಿ ಹೋಗಿದ್ದೆವು. ಆಗ ಸಿದ್ದರಾಮಯ್ಯ ಅವರು ನನ್ನ ಕ್ಷೇತ್ರಕ್ಕೂ ಅನುದಾನ ಸಿಗುತ್ತಿಲ್ಲ. ಲೋಕಸಭಾ ಚುನಾವಣೆವರೆಗೂ ಕಾಯಿರಿ. ಕುಮಾರಸ್ವಾಮಿಯರವ್ನನು ಕೆಳಗಿಳಿಸೋಣ ಎಂದಿದ್ದರು ಎಂದು ಸುಧಾಕರ್‌ ಟ್ವೀಟ್‌ ಮಾಡಿದ್ದರು. ಇದಕ್ಕೆ ಎಂಟಿಬಿ ನಾಗರಾಜ್‌ ಪ್ರತಿಕ್ರಿಯೆ ನೀಡಿದ್ದು, ಸುಧಾಕರ್‌ ಸುಳ್ಳು ಹೇಳಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಚುನಾವಣೆಯಲ್ಲಿ ಸುಧಾಕರ್‌ ಸೋತ ಮೇಲೆ ಭ್ರಮನಿರಸನರಾಗಿದ್ದಾರೆ. ಹೀಗಾಗಿ ಈ ರೀತಿಯ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರು ತಮ್ಮ ಮನೆ ದೇವರ ಮೇಲೆ ಆಣೆ ಮಾಡಿ ಈ ಮಾತನ್ನು ಹೇಳಲಿ ಎಂದು ಸವಾಲು ಹಾಕಿದ್ದಾರೆ. ಸುಧಾಕರ್‌ ಸೇರಿ ಹದಿನೇಳು ಶಾಸಕರು ಬಿಜೆಪಿಗೆ ಹೋಗಿದ್ದರು. ಅದರಲ್ಲಿ ಎಂಟಿಬಿ ನಾಗರಾಜ್‌ ಕೂಡಾ ಇದ್ದರು. ಎಂಟಿಬಿ ನಾಗರಾಜ್‌ ಇಷ್ಟು ದಿನ ಸಿದ್ದರಾಮಯ್ಯರನ್ನು ಬೈಯ್ಯುತ್ತಿದ್ದವರು ಇದ್ದಕ್ಕಿದ್ದಂತೆ ಅವರ ಪರವಾಗಿ ಮಾತನಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

Share Post