National

ಇಬ್ಬರು ಕೇಂದ್ರ ಸಚಿವರ ರಾಜೀನಾಮೆ; ಸಂಪುಟದಿಂದ ಹೊರಬಂದ ಮುಖ್ತಾರ್ ಅಬ್ಬಾಸ್‌ ನಖ್ವಿ

ನವದೆಹಲಿ; ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹಾಗೂ ಉಕ್ಕು ಖಾತೆ ಸಚಿವ ಆರ್‌ಸಿಪಿ ಸಿಂಗ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಇಬ್ಬರ ಸಚಿವರ ರಾಜ್ಯಸಭಾ ಸದಸ್ಯ ಸ್ಥಾನದ ಅವಧಿ ಇಂದಿಗೆ ಅಂತ್ಯಗೊಂಡಿದ್ದರಿಂದ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ನಖ್ವಿ ಅವರನ್ನು ಮತ್ತೊಂದು ಅವಧಿಗೆ ರಾಜ್ಯಸಭೆಗೆ ಕಳಿಸದಿರಲು ಬಿಜೆಪಿ ನಿರ್ಧರಿಸಿದೆ. ಹಾಗೆಯೇ ಆರ್‌ಸಿಪಿ ಸಿಂಗ್ ಅವರನ್ನು ಕೂಡ ಜೆಡಿ (ಯು) ಪಕ್ಷ ರಾಜ್ಯಸಭೆಗೆ ಕಳಿಸದಿರಲು ನಿರ್ಧರಿಸಿದೆ. ಬಿಹಾರದಲ್ಲಿ ಆರ್‌ಸಿಪಿ ಸಿಂಗ್ ಜೆಡಿಯು ನಾಯಕರಾಗಿದ್ದಾರೆ.

Share Post