CrimeNational

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ; ಘಟನೆ ಖಂಡಿಸಿದ ಪ್ರಧಾನಿ ಮೋದಿ

ನವದೆಹಲಿ; ಮಣಿಪುರದಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದಲ್ಲದೆ, ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ಪ್ರಧಾನಿಯಾದ ಮೇಲೆ ಇದೇ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಬಂದ ಪ್ರಧಾನಿ ನರೇಂದ್ರಮೋದಿಯವರು, ಮಹಿಳೆಯರನ್ನು ಗೌರವಿಸದ ಸಮಾಜ ತೃಣಕ್ಕೆ ಸಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹ ಘಟನೆಗಳಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಈ ವಿಚಾರ ಕೇಳಿ ನನ್ನ ಮನಸಿಗೆ ತೀವ್ರ ಘಾಸಿಯಾಗಿದೆ. ಇದು ನಾಚಿಕೆಗೇಡಿನ ಸಂಗತಿ. ಈ ಕೃತ್ಯ ಎಸಗಿದವರನ್ನು ನಾವು ಬಿಡುವುದಿಲ್ಲ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಮೋದಿ ಹೇಳಿದ್ದಾರೆ.

 

Share Post