National

ರಾಹುಲ್‌ ವಿಚಾರಣೆ ಹಿನ್ನೆಲೆ; ನಾಳೆ ಎಲ್ಲಾ ರಾಜಭವನಗಳ ಮುತ್ತಿಗೆ..?

ನವದೆಹಲಿ; ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ರಾಹುಲ್‌ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿ ಕಾಂಗ್ರೆಸ್‌ ದೇಶಾದ್ಯಂತ ಪ್ರತಿಭಟನೆ ಮಾಡಲು ಮುಂದಾಗಿದೆ. ನಾಳೆ ಎಲ್ಲಾ ರಾಜ್ಯಗಳ ರಾಜಭವನಗಳ ಮುಂದೆ ಧರಣಿ ಹಾಗೂ ರಾಜಭವನ ಮುತ್ತಿಗೆಗೆ ಕರೆ ನೀಡಲಾಗಿದೆ ಎಂದು ಹೇಳಲಾಗಿದೆ.

ಸತತ ಮೂರು ದಿನಗಳಿಂದ ರಾಹುಲ್‌ ಗಾಂಧಿಯವರನ್ನು ವಿಚಾರಣೆ ನಡೆಸಲಾಗುತ್ತಿದೆ. ವಿನಾಕಾರಣ ನಮ್ಮ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಎಐಸಿಸಿ ಕಚೇರಿಯಿಂದ ಎಲ್ಲಾ ರಾಜ್ಯ ಕಾಂಗ್ರೆಸ್‌ ಸಮಿತಿಗೆ ಸೂಚನೆ ಬಂದಿದ್ದು, ದೇಶಾದ್ಯಂತ ಪ್ರತಿಭಟನೆ ನಡೆಸುವಂತೆ ಸೂಚಿಸಲಾಗಿದೆ ಎಂದು ಹೇಳಲಾಗಿದೆ.

Share Post