NationalNewsPolitics

ಹಿಮಾಚಲದಲ್ಲಿ ಯಾವುದೇ ಭಿನ್ನಮತ ಇಲ್ಲ; ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರಗಿ; ಹಿಮಾಚಲ ಪ್ರದೇಶದಲ್ಲಿ ಸಿಎಂ ಹುದ್ದೆಗೆ ಆಯ್ಕೆ ಸಂಬಂಧ ಯಾವುದೇ ಬಂಡಾಯವಿಲ್ಲ.‌ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿವೆ. ಅವುಗಳನ್ನು ಸಮರ್ಥವಾಗಿ ಬಗೆಹರಿಸುತ್ತೇವೆ ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ‌ಖರ್ಗೆ ಸ್ಪಷ್ಟಪಡಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು ಈ ವಿಚಾರ ತಿಳಿಸಿದರು.

ಹಿಮಾಚಲ‌ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖ್ಖು ಪ್ರಮಾಣಚವನ ಸ್ವೀಕಾರ ಮಾಡಲಿದ್ದಾರೆ. ಇದಕ್ಕಾಗಿ ವಿಶೇಷ ವಿಮಾನದಲ್ಲಿ ತೆರಳುವ ಮೊದಲು ಖರ್ಗೆ ಅವರು ಮಾತನಾಡಿದರು. ಪಕ್ಷದ ಎಲ್ಲ ಮುಖಂಡರೊಂದಿಗೆ ನೂತನ ಮುಖ್ಯಮಂತ್ರಿ ಸಮನ್ವಯ ಸಾಧಿಸುತ್ತಾರೆ. ಹಿಮಾಚಲದಲ್ಲಿ ಏನೇ ಭಿನ್ನಾಭಿಪ್ರಾಯಗಳಿದ್ದರೂ ನಾವು ಅವುಗಳನ್ನು ಬಗೆಹರಿಸುತ್ತೇವೆ ಎಂದರು.

Share Post