CrimeNational

ಎನ್‌ಟಿಆರ್‌ ನಾಲ್ಕನೇ ಪುತ್ರಿ ಉಮಾಮಹೇಶ್ವರಿ ಆತ್ಮಹತ್ಯೆ

ಹೈದರಾಬಾದ್‌; ತೆಲುಗಿನ ಲೆಜೆಂಡರಿ ನಟ ಎನ್‌ಟಿಆರ್ ಅವರ ಕುಟುಂಬದಲ್ಲಿ ಅಹಿತಕರ ಘಟನೆಯೊಂದು ನಡೆದಿದೆ. ಎನ್‌ಟಿಆರ್‌ ಅವರ ನಾಲ್ಕನೇ ಪುತ್ರಿ ಕಾಂತಮನೇನಿ ಉಮಾಮಹೇಶ್ವರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಜುಬಿಲಿ ಹಿಲ್ಸ್‌ನ ಸ್ವಗೃಹದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಸದ್ಯ ಉಸ್ಮಾನಿಯಾ ಆಸ್ಪತ್ರೆಗೆ ಮೃತದೇಹವನ್ನು ತರಲಾಗಿದ್ದು, ಪೋಸ್ಟ್‌ಪರ್ಟಂ ನಂತರ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಗುತ್ತದೆ.

ಮಾನಸಿಕ ಸಮಸ್ಯೆ ಹಾಗೂ ಒತ್ತಡವೇ ಕಾರಣ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಉಮಾಮಹೇಶ್ವರಿಯವರ ಮಗಳ ಮದುವೆ ನಡೆದಿತ್ತು. ಅನಂತರ ಅದೇನಾಯಿತೋ ಉಮಾ ಮಹೇಶ್ವರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಗಾಗಲೇ ಚಂದ್ರಬಾಬು ನಾಯ್ಡು ಸೇರಿದಂತೆ ಕುಟುಂಬದವರೆಲ್ಲಾ ಉಮಾಮಹೇಶ್ವರಿ ಅಂತಿಮ ದರ್ಶನ ಪಡೆದಿದ್ದಾರೆ. ಜೂನಿಯರ್‌ ಎನ್‌ಟಿಆರ್‌ ವಿದೇಶದಲ್ಲಿ ಶೂಟಿಂಗ್‌ನಲ್ಲಿದ್ದು, ಅವರಿಗೂ ಮಾಹಿತಿ ನೀಡಲಾಗಿದೆ.

 

 

Share Post