CrimeNational

ಅಗ್ನಿಪತ್‌ ಯೋಜನೆಗೆ ವಿರೋಧ; ರೈಲಿಗೆ ಬೆಂಕಿ

ಬಿಹಾರ; ಸೇನೆಯಲ್ಲಿ ನೇಮಕಕ್ಕೆ ಕೇಂದ್ರ ಸರ್ಕಾರ ಅಗ್ನಿಪತ್‌ ಯೋಜನೆ ಜಾರಿಗೆ ತರುತ್ತಿರುವುದನ್ನು ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಬಿಹಾರದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನಾಕಾರರು ಹಿಂಸಾಚಾರ ನಡೆಸಿದ್ದು, ರೈಲು ಒಂದಕ್ಕೆ ಬೆಂಕಿ ಹಂಚಿದ್ದಾರೆ.

ರೈಲ್ವೆ ಹಳಿಗಳ ಮೇಲೆ ಕುಳಿತಿರುವ ಪ್ರತಿಭಟನಾಕಾರರು, ರೈಲುಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೇ ವೇಳೆ ಕೆಲ ಉದ್ತಿಕ್ತರು ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಬಿಹಾರ ರಾಜ್ಯದಾದ್ಯಂತ ಪ್ರತಿಭಟನೆಗಳು ಜೋರಾಗಿ ನಡೆಯುತ್ತಿವೆ. ಜಹಾನಾಬಾದ್‌ನಲ್ಲಿ ರೈಲು ತಡೆದು ಪ್ರತಿಭಟನೆ ನಡೆಸಲಾಗಿದ್ದು, ಈ ವೇಳೆ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

 

 

Share Post