NationalPolitics

ನಮ್ಮ ಗುರಿ ಕಾಂಗ್ರೆಸ್‌ ಅಧಿಕಾರಕ್ಕೆ ತರೋದು; ಡಿ.ಕೆ.ಶಿವಕುಮಾರ್‌

ನವದೆಹಲಿ; ನಮ್ಮ ಗುರಿ ಇರೋದು ಕಾಂಗ್ರೆಸ್‌ ಅಧಿಕಾರಕ್ಕೆ ತರೋದು. ಇದಕ್ಕಾಗಿ ನಾವೆಲ್ಲಾ ಸೇರಿ ಹೋರಾಟ ಮಾಡುತ್ತೇವೆ. ಅಷ್ಟು ಬಿಟ್ಟರೆ ನನಗೆ ಯಾರ ಬಗ್ಗೆಯೂ ಅಸಮಾಧಾನ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಸಭೆ ನಂತರ ಮಾತನಾಡಿದ ಅವರು, ಎರಡನೇ ಪಟ್ಟಿ ಸಂಬಂಧ ಚರ್ಚೆ ನಡೆಸಲಾಯಿತು. ಅವರತ್ತರಿಂದ ಎಪ್ಪತ್ತು ಪರ್ಸೆಂಟ್‌ ನಮ್ಮ ಕೆಲಸ ಆಗಿದೆ ಎಂದರು.

ರಾಜ್ಯದಲ್ಲಿ ಭ್ರಷ್ಟ ಸರ್ಕಾರ ತೊಲಗಬೇಕು. ಅದಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಈ ಬಾರಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share Post